ತಾತ್ಕಾಲಿಕವಾಗಿ ಗೋಶಾಲೆ ಆರಂಭ


ಮಡಿಕೇರಿ -ಕೊಡಗು ಜಿಲ್ಲೆಯಲ್ಲಿ ಪ್ರಾಕೃತಿಕ ವಿಕೋಪದ ಮುಂಜಾಗ್ರತಾ ಕ್ರಮ ಕೈಗೊಳ್ಳುವ ಸಲುವಾಗಿ ಜಾನುವಾರುಗಳ ಪ್ರಾಣ ರಕ್ಷಣೆಗೆ ಸಂಬಂದಿಸಿದಂತೆ ಜಿಲ್ಲಾಡಳಿತ ವತಿಯಿಂದ ಜಿಲ್ಲೆಯ ಮೂರು ತಾಲ್ಲೂಕುಗಳಲ್ಲಿ ತಾತ್ಕಾಲಿಕವಾಗಿ ಗೋಶಾಲೆ ತೆರೆಯಲಾಗಿದೆ. ಸಾರ್ವಜನಿಕರು ತಮ್ಮ ಜಾನುವಾರುಗಳನ್ನು ಹಾಗೂ ಪ್ರ್ರಕೃತಿಕ ವಿಕೋಪದಲ್ಲಿ ಸಿಲುಕಿರುವ ಜಾನುವಾರುಗಳಿಗೆ ಗೋಶಾಲೆಯಲ್ಲಿ ಉಚಿತವಾಗಿ ಮೇವು-ಆಹಾರ ಮತ್ತು ಚಿಕಿತ್ಸೆ ನೀಡಿ ಪೆÇೀಷಿಸಲಾಗುವುದು. ಪರಿಸ್ಥಿತಿ ಸುಧಾರಿಸಿದ ನಂತರ ಜಾನುವಾರುಗಳನ್ನು ಸಂಬಂಧಪಟ್ಟ ಮಾಲೀಕರಿಗೆ ಹಿಂತಿರುಗಿಸಲಾಗುವುದು. ಆದ್ದರಿಂದ ಸಾರ್ವಜನಿಕರು ತಮ್ಮ ಜಾನುವಾರುಗಳನ್ನು ಪೆÇೀಷಿಸಲು ಸಾದ್ಯವಾಗದಿದ್ದಲ್ಲಿ ಜಿಲ್ಲಾ ಮಟ್ಟದ ಸಹಾಯವಾಣಿ ಸಂಖ್ಯೆ 08272-229449, ಮಡಿಕೇರಿ ತಾಲ್ಲೂಕು ಪಶು ಆಸ್ಪತ್ರೆ ಸಹಾಯಕ ನಿರ್ದೇಶಕರು 08272-228805, ವಿರಾಜಪೇಟೆ ಪಶು ಆಸ್ಪತ್ರೆ ಸಹಾಯಕ ನಿರ್ದೇಶಕರು -08274-257228, ಸೋಮವಾರಪೇಟೆ ಪಶು ಆಸ್ಪತ್ರೆ, ಸಹಾಯಕ ನಿರ್ದೇಶಕರು- 08276-282127 ಸಹಾಯವಾಣಿಯiನ್ನು ಸಂಪರ್ಕಿಸಿ ಮಾಹಿತಿ ಪಡೆಯಬಹುದಾಗಿದೆ ಎಂದು ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ಉಪ ನಿರ್ದೇಶಕರಾದ ತಮ್ಮಯ್ಯ ಅವರು ಕೋರಿದ್ದಾರೆ.
Previous Post
Next Post

0 Post a Comment: