SDPI ಕುಶಾಲನಗರ ಘಟಕ ದಿಂ‌ದ ನೆರೆ ಸಂತ್ರಸ್ತ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಕಿಟ್ ವಿತರಣಾ ಕಾರ್ಯಕ್ರಮ.


ಕುಶಾಲನಗರ (TOC ಕೊಡಗು) : ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಕುಶಾಲನಗರ ಘಟಕದ ವತಿಯಿಂದ ಪ್ರಕೃತಿ ವಿಕೋಪ ಸಂಧರ್ಭದಲ್ಲಿ ನೆರೆಯಿಂದಾಗಿ ಮನೆಯಲ್ಲಿದ್ದ ಎಲ್ಲಾ ವಸ್ತುಗಳನ್ನು ಕಳೆದುಕೊಂಡಿರುವ ಸಂತ್ರಸ್ತ ಕುಟುಂಬಗಳ ವಿಧ್ಯಾರ್ಥಿಗಳಿಗೆ ಮುಂದಿನ ವಿಧ್ಯಾಭ್ಯಾಸಕ್ಕೆ ಯಾವುದೇ ತೊಂದರೆ ಆಗದಂತೆ ಶೈಕ್ಷಣಿಕ ಪರಿಕರಗಳನ್ನು ವಿತರಿಸಲಾಯಿತು.ಈ ಸಂಧರ್ಭದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ರಾಜ್ಯ ಕಾರ್ಯದರ್ಶಿ ಅಫ್ಸರ್ ಕೊಡ್ಲಿಪೇಟೆ ರವರು ಮಾತನಾಡಿ ಕೂಡಗಿನ ಪ್ರಕೃತಿ ವಿಕೋಪವನ್ನು ರಾಷ್ಟ್ರೀಯ ವಿಪತ್ತು ಎಂದು ಪರಿಗಣಿಸಿ ಸಂತ್ರಸ್ತರಿಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಹೆಚ್ಚಿನ ಪರಿಹಾರ ನೀಡುವಂತೆ ಆಗ್ರಹಿಸಿದರು. ಸ್ಥಳೀಯ ಘಟಕದ ಅಧ್ಯಕ್ಷರಾದ ಬಾಷಾ ರವರು ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ಟಿಪ್ಪು ಸುಲ್ತಾನ್ ಅಭಿಮಾನಿ ಸೇನೆ ರಾಜ್ಯಾಧ್ಯಕ್ಷರಾದ ಹಫೀಜ್ ಖಾನ್, ತಾಲ್ಲೂಕು ಮುಸ್ಲಿಂ ಒಕ್ಕೂಟದ ಉಪಾಧ್ಯಕ್ಷರಾದ ಅಕ್ಬರ್, ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಕೂಡಗು ಜಿಲ್ಲಾಧ್ಯಕ್ಷರಾದ ಸಲಾಂ, ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾದ ಸೋಮವಾರಪೇಟೆ ತಾಲ್ಲೂಕು ಅಧ್ಯಕ್ಷರಾದ ಮಹ್ಮದ್ ಶಫಿ ರವರು ಉಪಸ್ಥಿತರಿದ್ದರು.

Previous Post
Next Post

0 Post a Comment: